Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಶಿಕ್ಷಣದಿಂದ ಉಜ್ವಲ ಭವಿಷ್ಯ ನಿರ್ಮಾಣ: ದೊಡ್ಡಬಸವನಗೌಡ ಬಯ್ಯಾಪೂರ

ಡಿ.ಡಿ. ನ್ಯೂಸ್ : ಕುಷ್ಟಗಿ

Advertisement

ಶಿಕ್ಷಣ ಜೀವನದ ಬೆಳಕು ವಿದ್ಯಾರ್ಥಿನಿಯರು ಉನ್ನತ ಗುರಿ ಸಾಧಿಸುವ ಮೂಲಕ ಸಮಾಜದಲ್ಲಿ ಮಾದರಿಯಾಗಬೇಕು ಎಂದು ಕಾಂಗ್ರೇಸ್ ಯುವಮುಖಂಡ ದೊಡ್ಡಬಸವನಗೌಡ ಪಾಟೀಲ ಬಯ್ಯಾಪೂರ ಹೇಳಿದರು.news_1777825406_0_387.webpಕುಷ್ಟಗಿ ತಾಲೂಕಿನ ದೋಟಿಹಾಳ, ಕೇಸೂರು ಗ್ರಾಮದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿನಿಯರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಭಾಗದಲ್ಲಿ ಶಿಕ್ಷಣ ಜಾಗೃತಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಶಿಕ್ಷಣದಿಂದ ಉಜ್ವಲ ಭವಿಷ್ಯ ನಿರ್ಮಿಸಲಿದ್ದು ಶಿಕ್ಷಣವನ್ನು ಕೇವಲ ಅಂಕಗಳಿಗೆ ಸೀಮಿತಗೊಳಿಸದೆ ವ್ಯಕ್ತಿತ್ವ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು ಎಂದು ಹೇಳಿದರು.

ಲಾಡ್ಲೆಮಷಾಕ್ ದೋಟಿಹಾಳ ಮಾತನಾಡಿ ವಿದ್ಯಾರ್ಥಿಗಳ ಸಾಧನೆ ಪೋಷಕರು ಹಾಗೂ ಶಿಕ್ಷಕರ ಪರಿಶ್ರಮದ ಫಲವಾಗಿದೆ ಎಂದು ಅಭಿಪ್ರಾಯಪಟ್ಟರು. ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲ ಆಧಾರವಾಗಿದ್ದು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸನ್ಮಾನಿತ ವಿದ್ಯಾರ್ಥಿನಿಯರು ಮಾತನಾಡಿ ತಮ್ಮ ಯಶಸ್ಸಿಗೆ ಕಾರಣರಾದ ಪೋಷಕರು ಮತ್ತು ಗುರುಗಳಿಗೆ ಕೃತಜ್ಞತೆ ಸಲ್ಲಿಸಿದರು.

ಸನ್ಮಾನ: ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದ ವೈಷ್ಣವಿ ಹನಮಂತರಾವ ದೇಸಾಯಿ ಎಂಬ ವಿದ್ಯಾರ್ಥಿನಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ 598 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಎರಡನೇ ರ್ಯಾಂಕಿನಲ್ಲಿ ಸಾಧನೆ ಹಾಗೂ ದೋಟಿಹಾಳ ಗ್ರಾಮದ ಗೌಂಡಿ ಕೆಲಸ ಮಾಡುವನ ಮಗಳು ಸನಾ ಮಹ್ಮದರಫೀಕ್ ಇಟಗಿ ಎಂಬ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಲಿಯಲ್ಲಿ 592 ಅಂಕಗಳನ್ನು ಗಳಿಸಿ ದೋಟಿಹಾಳ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನದಲ್ಲಿ ಸಾಧಿಸಿದ ಹಿನ್ನಲೆಯಲ್ಲಿ ಕಾಂಗ್ರೇಸ್ ಮುಖಂಡರು ವಿದ್ಯಾರ್ಥಿನಿಯರ ಮನೆಗೆ ಭೇಟಿ ಸನ್ಮಾನಿಸಿ ಗೌರವಿಸಿದರು.

ನಿವೃತ್ತ ಪ್ರಾಚಾರ್ಯ ಆದಪ್ಪ ಸಾಲವಾಡಗಿ, ಬಸವರಾಜ ಶೆಟ್ಟರ, ಅಜ್ಮೀರಸಾಬ ಯಲಬುರ್ಗಿ, ಹನಮಂತರಾವ ದೇಸಾಯಿ, ಶುಖಮುನಿ ಈಳಗೇರ, ಉಮೇಶ ಮಡಿವಾಳರ, ಗುರುಸಿದ್ದಯ್ಯ ಮಳಿಮಠ,ಹೇಮನಗೌಡ ಬಸಾಪೂರ, ಮಹೇಶ ಕಾಳಗಿ, ಶ್ಯಾಮೀದಸಾಬ ಮುಜಾವರ, ಈರನಗೌಡ ಟೆಂಗುಂಟಿ, ಮಲ್ಲಿಕಾರ್ಜುನ ಅಂಗಡಿ, ಶ್ಯಾಹಿದ ಗಚ್ಚಿನಮನಿ, ಶಾಂತಕುಮಾರ, ಗುರುಪಾದಯ್ಯ ಮಳಿಮಠ ಸೇರಿದಂತೆ ಅನೇಕರು ಇದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!