ಗಂಗಾವತಿ ಕ್ಷೇತ್ರದ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಅತ್ಯಂತ ಸಂಭ್ರಮ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ಪರಣ್ಣ ಮುನವಳ್ಳಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಜಮಾಯಿಸಿದ ಸಾವಿರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು, ನೆಚ್ಚಿನ ನಾಯಕನ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನದ ಶುಭಾಶಯಗಳನ್ನು ಕೋರಿದರು.ಈ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಹೂಮಾಲೆ ಹಾಕಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು.
ಬಳಗ ಮಾನವೀಯತೆ ಮೆರೆದ ಅಭಿಮಾನಿಗಳ
ಕೇವಲ ಸಂಭ್ರಮಾಚರಣೆಗೆ ಸೀಮಿತವಾಗದ ಅಭಿಮಾನಿಗಳು, ಸರ್ಕಾರಿ ಮಹಿಳಾ ಮತ್ತು
ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಮುಖಂಡರು ಹಾಗೂ ಕಾರ್ಯಕರ್ತರು.
ಪೌಷ್ಟಿಕ ಆಹಾರ ವಿತರಣೆ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಣಂತಿಯರು ಹಾಗೂ ಮಕ್ಕಳಿಗೆ ಹಾಲು ಮತ್ತು ಹಣ್ಣು-ಹಂಪಲುಗಳನ್ನು ವಿತರಿಸುವ ಮೂಲಕ ಅವರ ಆರೋಗ್ಯ ಸುಧಾರಣೆಗೆ ಹಾರೈಸಿದರು.
"ನಮ್ಮ ನಾಯಕರ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಸೇವೆ ಸಲ್ಲಿಸುವುದು ನಮಗೆ ಹೆಚ್ಚಿನ ತೃಪ್ತಿ ನೀಡಿದೆ. ಪರಣ್ಣ ಮುನವಳ್ಳಿಯವರ ಜನಪರ ಕಾಳಜಿ ನಮಗೆಲ್ಲರಿಗೂ ಪ್ರೇರಣೆ." ಎಂದು ಅಭಿಮಾನಿಗಳು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಪ್ರಮುಖ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಪರಣ್ಣ ಮುನವಳ್ಳಿಯವರ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿ, ತಮ್ಮ ನಾಯಕನಿಗೆ ಸುದೀರ್ಘ ಆಯಸ್ಸು ಮತ್ತು ಆರೋಗ್ಯ ಲಭಿಸಲಿ ಎಂದು ಹಾರೈಸಿದರು.
