Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಯಲಬುರ್ಗಾದಲ್ಲಿ ಕುಡಿಯುವ ನೀರಿಗೆ ಮುಂಜಾಗ್ರತಾ ಕ್ರಮ: ಸಮಸ್ಯೆಗೆ ಸಹಾಯವಾಣಿ ಸೌಲಭ್ಯ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಯಲಬುರ್ಗಾ ಪಟ್ಟಣದಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸಮರ್ಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪಟ್ಟಣ ಪಂಚಾಯಿತಿ (ಪಪಂ) ಮುಖ್ಯಾಧಿಕಾರಿ ನಾಗೇಶ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಯಾವುದೇ ಸಣ್ಣಪುಟ್ಟ ತೊಂದರೆ ಉಂಟಾದಲ್ಲಿ ಪಪಂ ವತಿಯಿಂದ ಆರಂಭಿಸಲಾದ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ ತಕ್ಷಣ ಸಮಸ್ಯೆ ಪರಿಹರಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ಪಟ್ಟಣದಲ್ಲಿ ಸಹಾಯವಾಣಿ ವ್ಯವಸ್ಥೆಯ ಕುರಿತು ಜನಜಾಗೃತಿ ಮೂಡಿಸಲು ಬ್ಯಾನರ್ ಅಂಟಿಸಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಪಟ್ಟಣದ 15 ವಾರ್ಡ್‌ಗಳಲ್ಲಿ ಒಟ್ಟು 32 ಬೋರ್‌ವೆಲ್‌ಗಳನ್ನು ಕಾರ್ಯನಿರ್ವಹಣೆಗೆ ತರಲಾಗಿದ್ದು, ಪ್ರತಿಯೊಂದು ವಾರ್ಡ್‌ಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.news_1777821295_0_868.webpಕುಡಿಯುವ ನೀರಿನ ಗುಣಮಟ್ಟ ಕಾಪಾಡುವ ಸಲುವಾಗಿ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಲಾಗುತ್ತಿದ್ದು, ನೀರು ಸಂಗ್ರಹಿಸುವ ಸಿಸ್ಟರ್ನ್‌ಗಳ ಶುದ್ಧೀಕರಣ ಕಾರ್ಯವೂ ನಿರಂತರವಾಗಿ ನಡೆಯುತ್ತಿದೆ. ಜೊತೆಗೆ, ಪೈಪ್‌ಲೈನ್‌ಗಳಲ್ಲಿ ಉಂಟಾಗುವ ತಾಂತ್ರಿಕ ದೋಷಗಳನ್ನು ತಕ್ಷಣವೇ ಸರಿಪಡಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ವಾರ್ಡ್‌ನಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಚಿತವಾಗಿ ಯೋಜನೆ ರೂಪಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಿಕೊಂಡು ಪಪಂಗೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!