Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆಯಾಗದಿರಲಿ

ಡಿ.ಡಿ. ನ್ಯೂಸ್ : ಗಂಗಾವತಿ

Advertisement

*ಅಧಿಕಾರಿಗಳಿಗೆ ಶಾಸಕ ಜನಾರ್ಧನ ರೆಡ್ಡಿ ತಾಕೀತು* 

*ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ವಿಪತ್ತು ನಿರ್ವಹಣೆ ಸಭೆ* 

 ಗಂಗಾವತಿ ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ತ್ವರಿತವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕ ಜನಾರ್ಧನ ರೆಡ್ಡಿ ಸೂಚನೆ ನೀಡಿದರು.

ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಶನಿವಾರ ನಡೆದ ಕುಡಿವ ನೀರಿನ ಸಮಸ್ಯೆ ಕುರಿತು ನಡೆದ ತಾಲೂಕು ವಿಪತ್ತು ನಿರ್ವಹಣೆ ಸಭೆಯ ಅಧ್ಯಕ್ಷತೆಯ ವಹಿಸಿ ಮಾತನಾಡಿದರು.news_1777821858_0_498.webpಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಫ್ತಿಯಲ್ಲಿ ಯಾವುದೇ ಗ್ರಾಮ, ವಾರ್ಡ್ , ಕಾಲೋನಿಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕು. ಆರಂಭಿಸಿರುವ ಸಹಾಯವಾಣಿ ಸಂಖ್ಯೆಗೆ ಬರುವ ದೂರುಗಳಿಗೆ ಸ್ಪಂದಿಸಿ ತ್ವರಿತವಾಗಿ ಬಗೆಹರಿಸಬೇಕು. ಈ ಬೇಸಿಗೆ ಮುಗಿಯುವ ವರೆಗೂ ನಿರಂತರವಾಗಿ ನೀರಿನ ಸಮಸ್ಯೆ ಬರದಂತೆ ಕ್ರಮವಹಿಸಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಪರೀಕ್ಷೆ ಕಡ್ಡಾಯವಾಗಿ ಮಾಡಬೇಕು ಎಂದರು.

ಬೇಸಿಗೆ ಆರಂಭದಲ್ಲಿ 19 ಗ್ರಾಮಗಳಲ್ಲಿ ಮಾತ್ರ ನೀರಿನ ಸಮಸ್ಯೆ ಉಲ್ಬಣಗೊಂಡಿತ್ತು. ಇದೀಗ 37 ಗ್ರಾಮಗಳನ್ನು ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನಾಗಿ ಗುರುತಿಸಲಾಗಿದೆ. 40 ಖಾಸಗಿ ಬೋರ್ ವೆಲ್ ಗಳಿಂದ ನೀರು ಪೂರೈಸುವ ಕೆಲಸ ಮಾಡಲಾಗುತ್ತಿದೆ. ಆರ್ ಓ ಪ್ಲಾಂಟ್ ಗಳನ್ನು ಸಹ ರಿಪೇರಿ ಮಾಡಿಸಿ ಸಾರ್ವಜನಿಕರಿಗೆ ಶುದ್ಧ ಕುಡಿವ ನೀರು ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕ ಜನಾರ್ಧನ ರೆಡ್ಡಿ ಸೂಚನೆ ನೀಡಿದರು.

ಗಂಗಾವತಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಮಾತನಾಡಿ, ಕುಡಿವ ನೀರಿನ ಸಮಸ್ಯೆಗಾಗಿ ಸ್ಪಂದಿಸಲು ಸಹಾಯವಾಣಿ ಆರಂಭಿಸಿದ್ದು, ಈಗಾಗಲೇ 30 ದೂರುಗಳು ಬಂದಿದ್ದು, ತ್ವರಿತವಾಗಿ ಸ್ಥಾನಿಕ ಪರಿಶೀಲನೆ ಮಾಡಿ ಬಗೆಹರಿಸಲಾಗಿದೆ. ನೀರಿನ ಸಮಸ್ಯೆ ಇರುವ 37 ಗ್ರಾಮಗಳಲ್ಲಿಸಮಸ್ಯೆ ಇದ್ದು, 40 ಖಾಸಗಿ ಬೋರ್ ವೆಲ್ ಗಳಿಂದ ನೀರು ಪೂರೈಸಲಾಗುತ್ತಿದೆ. ಇದರಲ್ಲಿ 22 ಬೋರ್ ವೆಲ್ ಗಳು ದಾನಿಗಳು ನೀಡಿದ್ದು, 18 ಬೋರ್ ವೆಲ್ ಗಳು ಬಾಡಿಗೆ ಪಡೆಯಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಕೊಪ್ಪಳ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಅವರು, ಗಂಗಾವತಿ ವಿಧಾನಸಭಾ ಕ್ಷೇತ್ರದ ಕೊಪ್ಪಳ ತಾಲೂಕಿಗೆ ಸಂಬಂಧಿಸಿದ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇರುವ ಗ್ರಾಮಗಳು ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಆರ್ ಡಬ್ಲ್ಯೂ ಎಸ್ ಇಇಗಳಾದ ಮಹೇಶ ಶಾಸ್ತ್ರಿ, ಎಇಇ ದೇವಣ್ಣ ಕಟ್ಟಿ, ಹೊನ್ನಪ್ಪ ಬಿ., ಗ್ರೇಡ್ 2 ತಹಸೀಲ್ದಾರ್ ಮಹಾಂತಗೌಡ ಪಾಟೀಲ್, ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್, ಗಂಗಾವತಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಗಳ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸೇರಿ ಇತರರಿದ್ದರು.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!