*ನರೇಗಾ ಕೂಲಿಕಾರ್ಮಿಕರಿಂದ ಕೆಕ್ ಕತ್ತರಿಸಿ ಅಚರಣೆ*
*ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಕೊಡುಗೆ ಅಪಾರ*
ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾ.ಪಂ ವ್ಯಾಪ್ತಿಯಲ್ಲಿ ಅಕುಶಲ ಕೂಲಿಕಾರರಿಗೆ ನಾಲಾ ಹೂಳೆತ್ತುವ ಕೆಲಸ ನೀಡಲಾಗಿದ್ದು, ಈ ವೇಳೆ ಕಾಮಗಾರಿ ಸ್ಥಳದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.
ಈ ವೇಳೆ ತಾಲೂಕು ಐಇಸಿ ಸಂಯೋಜಕರಾದ ಶರಣಪ್ಪ ಹಾಳಕೇರಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಕೊಡುಗೆ ಅಪಾರ. ಕಾರ್ಮಿಕರು ಇಲ್ಲದ ದೇಶವನ್ನು ಊಹಿಸಲು ಸಾಧ್ಯವಿಲ್ಲ.ಹೀಗಾಗಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಎಲ್ಲ ಕಾರ್ಮಿಕರಿಗೂ ಮೇ 1 ರ ವಿಶ್ವ ಕಾರ್ಮಿಕ ದಿನಾಚರಣೆಯ ಶುಭಾಶಯಗಳು. ಕಾರ್ಮಿಕರಿಗಾಗಿಯೇ ಜಗತ್ತಿನಾದ್ಯಂತ ಈ ದಿನ ಆಚರಿಸಲಾಗುತ್ತಿದೆ ಎಂದರು.
ನರೇಗಾ ಯೋಜನೆಯಡಿ ಕೈಗೊಳ್ಳುವ ಸಾಮೂಹಿಕ ಕಾಮಗಾರಿಗಳಿಗೆ ಎನ್ಎಂಎಂಎಸ್ ಹಾಜರಾತಿ ಮೂಲಕ ವೈಯಕ್ತಿಕ ಪೊಟೊ ತೆಗೆದುಕೊಳ್ಳಲಾಗುತ್ತಿದೆ. ಕೆಲಸಕ್ಕೆ ಬರುವ ಪ್ರತಿಯೊಬ್ಬರೂ ಪೊಟೊ ತೆಗೆಸಿಕೊಂಡಲ್ಲಿ ವೇತನ ಸಮಸ್ಯೆ ಬರುವುದಿಲ್ಲ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಪೊಟೊ ತೆಗೆಸಿಕೊಂಡು ಕೆಲಸ ಮಾಡಬೇಕೆಂದು ತಿಳಿಸಿದರು.
ಕೂಲಿಕಾರರು ಗುಳೆ ಹೊಗುವುದನ್ನು ತಡೆಗಟ್ಟಿ ಇದ್ದೂರಲ್ಲೆ ಕೆಲಸ ಕೊಡಲಾಗುತ್ತಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು. ಈಗ ಬೇಸಿಗೆ ಇರುವುದರಿಂದ ಅರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ನೀರು ಸರಿಯಾಗಿ ಕುಡಿಯಬೇಕು. ಆರೋಗ್ಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಯೋಜನೆಯಲ್ಲಿ ಆದಂತಹ ಹೊಸ ಬದಲಾವಣೆಗಳು ಹಾಗೂ ಹಾಜರಾತಿ ಕುರಿತು ಮಾಹಿತಿಯನ್ನು ತಿಳಿಸಿದರು.
ಇದೇ ವೇಳೆ ಕಾರ್ಮಿಕ ದಿನಾಚರಣೆಯನ್ನು ಕೂಲಿಕಾರರಿಂದ ಕೆಕ್ ಕತ್ತರಿಸಿ ಸಿಹಿ ಹಂಚಲಾಯಿತು. ಗ್ರಾಮ ಕಾಯಕ ಮಿತ್ರರಾದ ಮಂಜುಳಾ ವಾಲ್ಮಿಕಿ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.
