deshadoothanews

*ಬಸವಣ್ಣನವರ ತತ್ವಾದರ್ಶಗಳನ್ನು ಅನುಸರಿಸಬೇಕು*

0
ಮಾಲೂರು:- ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಮಹಾ ಸಂದೇಶವನ್ನು ನೀಡಿದ ಬಸವಣ್ಣನವರ ಜಯಂತಿಯನ್ನು  ಆಚರಿಸಲಾಗುತ್ತಿದೆ ಎಂದು ಮುಖ್ಯಶಿಕ್ಷಕಿ ಜಲಜಾಕ್ಷಿ ರವರು ತಿಳಿಸಿದರು.
ಮಾಲೂರು ತಾಲೂಕಿನ ಮಡಿವಾಳ ಗ್ರಾಮ ಪಂಚಾಯತಿಯ ಎಂ.ಸಿ ಹಳ್ಳಿಯ ಸ.ಹಿ.ಪ್ರಾ.ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಯಕವೇ ಕೈಲಾಸ ಎಂಬಂತೆ ಪ್ರತಿಯೊಬ್ಬರೂ ತಮ್ಮ ತಮ್ಮ ಜೀವನೋಪಾಯಕ್ಕಾಗಿ ಒಂದು ವೃತ್ತಿಯನ್ನು ಮಾಡಲೇಬೇಕು. ಮಾಡುವ ಕೆಲಸದಲ್ಲಿಯೇ ದೇವರನ್ನು ಕಾಣಬೇಕು. ಜೊತೆಗೆ ಜಗಜ್ಯೋತಿ ಬಸವಣ್ಣನವರ ತತ್ವಾದರ್ಶಗಳನ್ನು ನಾವೆಲ್ಲರೂ ಅನುಸರಿಸಬೇಕು. ಮುಖ್ಯವಾಗಿ ನವ ಸಮಾಜ ನಿರ್ಮಾಣ ಮಾಡಲು ಶ್ರಮಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಶಿಕ್ಷಕಿಯರಾದ ಭಾಗ್ಯಲಕ್ಷ್ಮಿ, ಗೀತಾ, ಕೃಷ್ಣವೇಣಿ, ಸುಜಾತ ಇತರರು ಇದ್ದರು.
Leave A Reply

Your email address will not be published.