deshadoothanews

*ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ*

ಡಿ ಡಿ ನ್ಯೂಸ್. ಗದಗ

0
ಡಿ ಡಿ ನ್ಯೂಸ್. ಗದಗ : ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ ಪೂರಕ ವಾತಾವರಣ ನಿರ್ಮಿಸಲು ಯೋಜನೆಗಳನ್ನು ರೂಪಿಸುವ ಕುರಿತು ಆಳವಾದ ಅಧ್ಯಯನ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲು ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ.ಪಾಟೀಲ ಅವರು ಹೇಳಿದರು.
ನಗರದ ರೈತರ ಭವನದಲ್ಲಿ ಸೋಮವಾರ ಜರುಗಿದ ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯನ್ನು ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ತಳಮಟ್ಟದಲ್ಲಿ ಅಧ್ಯಯನ ಮಾಡಿ ಉತ್ತಮ ವರದಿಯನ್ನು ಸರಕಾರಕ್ಕೆ ಒಂದು ತಿಂಗಳೊಳಗಾಗಿ ಸಲ್ಲಿಸಲು ತಿಳಿಸಿದರು. ಗದಗ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸಲು ಪೂರಕ ವಾತಾವರಣವಿದೆ. ಇರುವ ಸಂಪನ್ಮೂಲ ಸಮರ್ಪಕವಾಗಿ ಬಳಸಿ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸೋಣ ಎಂದರು.
ಈಗಾಗಲೇ ರಚಿಸಲಾದ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ಜಿಲ್ಲೆಯಲ್ಲಿರುವ ವಾಸ್ತುಶಿಲ್ಪಕ್ಕೆ ಪ್ರಸಿದ್ದಿ ಪಡೆದ ಲಕ್ಕುಂಡಿ, ಹರ್ತಿ, ಡಂಬಳ, ಹುಲಕೋಟಿ ಸೇರಿದಂತೆ ಇತರೆ ಸ್ಥಳಗಳು ಐತಿಹಾಸಿಕ ದೇವಾಲಯಗಳನ್ನು ಹೊಂದಿದ್ದು ಈ ಕುರಿತು ಆಳವಾದ ಅಧ್ಯಯನದ ಅವಶ್ಯಕತೆ ಇದೆ.
ದೇಶದಲ್ಲೇ ಶುದ್ಧ ಗಾಳಿಗೆ ಗದಗ ಜಿಲ್ಲೆ ಹೆಸರುವಾಸಿಯಾಗಿದೆ. ಅದೇ ರೀತಿ ಭಾವೈಕ್ಯತೆಗೆ ಶಿರಹಟ್ಟಿ ಮತ್ತು ಅಂತೂರು ಬೆಂತೂರು ಭಾವೈಕ್ಯತಾ ಕೇಂದ್ರಗಳು ಮಾದರಿಯಾಗಿವೆ. ಪ್ರಸ್ತುತ ಸಮಾಜಕ್ಕೆ ಅಗತ್ಯವಿರುವ ಭಾವೈಕ್ಯತಾ ಸಾರುವ ಸಂದೇಶಗಳನ್ನು ಹಿಂದಿನಿಂದಲೂ ನೀಡುತ್ತಾ ಬಂದಿದೆ. ಜೊತೆಗೆ ಜಿಲ್ಲೆಯಲ್ಲಿ ಕಲೆ, ಸಾಹಿತ್ಯ, ಸಂಗೀತ, ಸಂಸ್ಕøತಿ ಕ್ಷೇತ್ರಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದಿದೆ. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಗೀತೆಯನ್ನು ಇಂದಿಗೂ ನಾವು ನಾಡಗೀತೆಯೇಂದೇ ಉಚ್ಛರಿಸುವುದುಂಟು ಎಂದರು.
ರೋಣ,ಗಜೇಂದ್ರಗಡ,ನರಗುಂದ,ಶ್ರೀಮಂತಗಡ ಕೋಟೆಗಳು ಐತಿಹಾಸಿಕ ಚಾರಿತ್ರ್ಯ ಸಾರುವ ಕೋಟೆಗಳಾಗಿವೆ. ಹತ್ತಿರದ ಕಪ್ಪತಗುಡ್ಡ ಔಷಧಿ ಗುಣವುಳ್ಳ ಸಸ್ಯ ಸಂಪತ್ತನ್ನು ತನ್ನ ಒಡಲಲ್ಲಿ ಅಡಗಿಸಿಕೊಂಡು ಸಹ್ಯಾದ್ರಿಯಾಗಿದೆ. ಬಿಂಕದಕಟ್ಟಿಯಲ್ಲಿ ಇರುವ ಪ್ರಾಣಿ ಸಂಗ್ರಹಾಲಯವು ನಿರಂತರವಾಗಿ 50 ವರ್ಷಗಳನ್ನು ಪೂರೈಸಿ ಸುವರ್ಣ ಸಂಭ್ರಮ ಆಚರಣೆ ಮಾಡಿದೆ. ಈ ಸಂಗ್ರಹಾಲಯವು ಇನ್ನೂ ಹೆಚ್ಚಿನ ಜನರನ್ನು ಆಕರ್ಷಿಸುವಂತಾಗಬೇಕು. ನಗರದ ಭೀಷ್ಮಕೆರೆ, ಜುಮ್ಮಾ ಮಸೀದಿ, ತಿರಂಗಾ ಪಾರ್ಕ , ಬೆಟಗೇರಿಯ ತಾರಾಲಯ, ಪ್ರಾಚ್ಯ ವಸ್ತು ಸಂಗ್ರಹಾಲಯ, ನೇಕಾರಿಕೆ ಇವೆಲ್ಲವುಗಳು ಪ್ರವಾಸಿಗರ ಆಕರ್ಷಣೆಗೆ ಪೂರಕವಾಗಿವೆ. ಇವುಗಳನ್ನು ಸೇರಿದಂತೆ ಜಿಲ್ಲೆಯ ಅನೇಕ ತಾಣಗಳನ್ನು ಅಭಿವೃದ್ಧಿಪಡಿಸಲು ರಚಿಸಲಾದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿ
Leave A Reply

Your email address will not be published.