deshadoothanews

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :

 

 ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜುಲೈ 1 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 1ರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಭಾಗಿಯಾಗುವರು. ಸಂಜೆ 7 ಗಂಟೆಗೆ ಕೊಪ್ಪಳ ನಗರದಿಂದ ನಿರ್ಗಮಿಸಿ ಕಾರಟಗಿಗೆ ಪ್ರಯಾಣ ಬೆಳೆಸಿ ರಾತ್ರಿ 8 ಗಂಟೆಗೆ ಕಾರಟಗಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸುವರು.
ಜುಲೈ 2ರ ಬೆಳಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ಕನಕಗಿರಿ ತಾಲೂಕಿಗೆ ಪ್ರಯಾಣಿಸಿ ಬೆಳಗ್ಗೆ 11 ಗಂಟೆಗೆ ಕಲಕೇರಿ, 12 ಗಂಟೆಗೆ ಬೆನಕನಾಳ, ಮಧ್ಯಾಹ್ನ ಗಂಟೆಗೆ ಸುಳೇಕಲ್, ಮಧ್ಯಾಹ್ನ 3 ಗಂಟೆಗೆ ತಿಪ್ಪನಾಳ ಗ್ರಾಮಗಳಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸುವರು. ಸಂಜೆ 5 ಗಂಟೆಗೆ ಕನಕಗಿರಿಯಿಂದ ನಿರ್ಗಮಿಸಿ ಗಂಗಾವತಿ, ಹೊಸಪೇಟೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಜಿ.ಎಸ್.ಮಧುಸೂದನ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.