ಚುನಾವಣೆ-2023 ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ

ಕೊಪ್ಪಳ ಏಪ್ರಿಲ್ 23 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಹಿನ್ನೆಲೆಯಲ್ಲಿ
ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಇನ್ನೀತರ ಇಲಾಖೆಗಳ ಸಹಯೋಗದಲ್ಲಿ ಏಪ್ರೀಲ್ 25ರಂದು ಮತದಾನ ಜಾಗೃತಿ ಕುರಿತು ವಾಕಥಾನ್ ನಡೆಯಲಿದೆ.
ಅಂದು ಸಂಜೆ 4 ಗಂಟೆಗೆ ತಾಲೂಕು ಕ್ರೀಡಾಂಗಣದಿAದ ಆರಂಭಗೊAಡು ಸಾಲಾರಜಂಗ್ ರಸ್ತೆ, ಶಾರದಾ ಟಾಕೀಸ್ ರಸ್ತೆ, ಗಡಿಯಾರ ಕಂಬ, ಜವಾಹರ ರಸ್ತೆ ಮತ್ತು ಅಶೋಕ್ ಸರ್ಕಲ್ ಮಾರ್ಗವಾಗಿ ವಾಕಥಾನ್ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments (0)
Add Comment